ಇಂದೋರ್, ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೊಲದಲ್ಲಿ ಇರಿಸಲಾಗಿದ್ದ ಬಲೆಗೆ ಸಿಲುಕಿ ಚಿರತೆಯೊಂದು ಗುರುವಾರ ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಡು ಹಂದಿ ಮತ್ತು ಮೊಲಗಳಂತಹ ಪ್ರಾಣಿಗಳಿಗೆ ಬಲೆ ಇಡಲಾಗಿದೆ ಎಂದು ಅವರು ಹೇಳಿದರು.

ಮನ್ಪುರ್ ಪ್ರದೇಶದಲ್ಲಿ ಚಿರತೆ ಬಲೆಗೆ ಬಿದ್ದಿರುವುದು ಪತ್ತೆಯಾಗಿದೆ. ಪ್ಲಾಟ್ ಹೊಂದಿರುವ ರೈತನನ್ನು ವಶಕ್ಕೆ ಪಡೆಯಲಾಗಿದ್ದು, ಅದರ ಕಾವಲುಗಾರನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಎಂಎಸ್ ಸೋಲಂಕಿ ತಿಳಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.