ಡೆಹ್ರಾಡೂನ್, ಉತ್ತರಾಖಂಡದ ಕೇದಾರನಾಥದಲ್ಲಿ ಶುಕ್ರವಾರ ಮುಂಜಾನೆ ಏಳು ಜನರಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.

ಹೆಲಿಕಾಪ್ಟರ್ ಹಿಮಾಲಯ ದೇವಾಲಯದ ಹೆಲಿಪ್ಯಾಡ್‌ನಿಂದ ಕೆಲವು ಮೀಟರ್‌ಗಳ ದೂರದಲ್ಲಿ ಲ್ಯಾಂಡ್ ಆಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಏಳು ಮಂದಿ ಇದ್ದರು ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.