ಜಮ್ಮು, ಜಮ್ಮು ರೈಲ್ವೇ ನಿಲ್ದಾಣದ ಬಳಿಯ ಕೊಳೆಗೇರಿಯೊಂದರಲ್ಲಿ ಭಾರಿ ಬೆಂಕಿ ಆವರಿಸಿದ್ದು, ಎರಡು ಡಜನ್‌ಗೂ ಹೆಚ್ಚು ಗುಡಿಸಲುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 6.50 ರ ಸುಮಾರಿಗೆ ತ್ರಿಕೂಟ ನಗರದ ಪೂರ್ವ ಕಾಲೋನಿಯಲ್ಲಿ ಮರದ ಗುಡಿಸಲುಗಳನ್ನು ಹೊಂದಿರುವ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಬೆಂಕಿಗೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.