ಹೈದರಾಬಾದ್: ದೇಶ ಮತ್ತು ರಾಜ್ಯಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಶ್ಲಾಘಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮಂಗಳವಾರ ಕ್ರಿಕೆಟಿಗನಿಗೆ ವಸತಿ ನಿವೇಶನ ಮತ್ತು ಸರ್ಕಾರಿ ಉದ್ಯೋಗವನ್ನು ಬಹುಮಾನವಾಗಿ ಘೋಷಿಸಿದ್ದಾರೆ.

ಕಳೆದ ವಾರ ಭಾರತ ಟಿ20 ವಿಶ್ವಕಪ್ ಗೆಲುವಿನ ನಂತರ ತನ್ನ ತವರು ಹೈದರಾಬಾದ್‌ಗೆ ಮರಳಿದ ಸಿರಾಜ್ ಇಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದರು.

ಸಿಎಂ ಸಿರಾಜ್ ಅವರನ್ನು ಸನ್ಮಾನಿಸಿದರು ಮತ್ತು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರನ್ನು ಶ್ಲಾಘಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಹೈದರಾಬಾದ್ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಕ್ತ ವಸತಿ ನಿವೇಶನವನ್ನು ಗುರುತಿಸಿ ಸಿರಾಜ್‌ಗೆ ಸರ್ಕಾರಿ ನೌಕರಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.