ಡೆಹ್ರಾಡೂನ್, ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಮಂಗಳವಾರ ವಾಹನವು 150 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಏಳು ನೇಪಾಳ ಪ್ರಜೆಗಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೇತಾಳಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ನೇಪಾಳ ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಅಪಘಾತದ ಬಗ್ಗೆ ಮಾಹಿತಿ ಪಡೆದ ರಾಜ್ಯ ವಿಪತ್ತು ನಿರ್ವಹಣಾ ಟೀ (ಎಸ್‌ಡಿಆರ್‌ಎಫ್) ತಂಡವು ಸ್ಥಳಕ್ಕೆ ಧಾವಿಸಿತು. ಎಸ್‌ಡಿಆರ್‌ಎಫ್ ತಂಡ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಎಂಟು ಮೃತದೇಹಗಳನ್ನು ಹೊರತೆಗೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನದಲ್ಲಿ ಒಂಬತ್ತು ನೇಪಾಳ ಪ್ರಜೆಗಳು ಇದ್ದರು, ಎಲ್ಲರೂ ಮಹೇಂದ್ರನಗರ ನಿವಾಸಿಗಳು. ಅವಘಡ ಸಂಭವಿಸಿದಾಗ ಅವರು ಮನೆಗೆ ತೆರಳುತ್ತಿದ್ದರು. ಮೃತಪಟ್ಟವರಲ್ಲಿ ಚಾಲಕ ರಾಜೇಂದ್ರ ಕುಮಾರ್ ಬೇತಲಘಟ್ಟ ನಿವಾಸಿ ಎಂದು ತಿಳಿದುಬಂದಿದೆ.